ಶಿವಮೊಗ್ಗದಲ್ಲಿ ನಿಯಂತ್ರಣ ತಪ್ಪಿದ ಬೈಕ್‌ ಚಾಲಕ; ಅಡ್ಡ ಬಂದೇ ಬಿಡ್ತು ಚಿರತೆ! ಮುಂದೇನಾಯ್ತು? ಇಲ್ಲಿದೆ ನೋಡಿ.

Share This Newsಶಿವಮೊಗ್ಗ : ಬೈಕ್‌ ಡಿಕ್ಕಿಗೆ ಚಿರತೆ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ನಡೆದಿದೆ.ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದ ವೇಳೆ ಚಿರತೆ ಎದುರಿಗೆ ಬಂದಿದೆ.ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ ದಾಟಲು ಅಡ್ಡ ಬಂದಿತ್ತು. ಈ ವೇಳೆ ಸವಾರನಿಗೆ ಬೈಕ್ ನಿಯಂತ್ರಿಸಲು ಸಾಧ್ಯವಾಗದೆ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಚಿರತೆಯು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಇದರ ಪರಿಣಾಮ ಬೈಕ್ ಸಮೇತ ಕೆಳಗೆ ಬಿದ್ದ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಗಾಜನೂರು ಆರ್​ ಎಫ್​ ಓ ವಿನಯ್​ ಕುಮಾರ್​ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. Share This News