ಬೆಂಗಳೂರು ನಗರದಲ್ಲಿ ಕನ್ನಡ ಚಿತ್ರರಂಗದ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಳ್ಳಾರಿ ಮೂಲದ ಉದ್ಯಮಿ ಹಾಗೂ ಎವಿಆರ್ ಗ್ರೂಪ್ ಸಂಸ್ಥಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಅವರನ್ನು ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಎಸಿಪಿ ಚಂದನ್ ಮತ್ತು ತಂಡದಿಂದ ಆರೋಪಿ ಅರೆಸ್ಟ್ ಮಾಡಲಾಗಿದೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಲಾಕ್ ಆಗಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ಪ್ರಕರಣದ ಹಿನ್ನೆಲೆ

ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ , ನಟಿ ಮತ್ತು ಉದ್ಯಮಿ 2021ರಲ್ಲಿ ಪರಿಚಿತರಾದರು. ಆರಂಭದಲ್ಲಿ ಸ್ನೇಹ, ಪ್ರೀತಿ, ಕಾಳಜಿ ತೋರಿದ ಉದ್ಯಮಿ ಬಳಿಕ ಮದುವೆ ಭರವಸೆ ನೀಡಿ ಸಂಬಂಧ ಬೆಳೆಸಿದರೆಂದು ನಟಿ ಆರೋಪಿಸಿದ್ದಾರೆ. ನಂತರ ಸಂಪರ್ಕ ಕಡಿತಗೊಂಡು, ಕಿರುಕುಳ, ಬೆದರಿಕೆ, ಹಲ್ಲೆ ಸೇರಿದಂತೆ ಹಲವು ಘಟನೆಗಳು ನಡೆದವು ಎಂದು ನಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀಲಂಕಾದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಕೂಡ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಪೊಲೀಸರ ಕ್ರಮ

ನಟಿಯ ದೂರು ಆಧರಿಸಿ ಗೋವಿಂದರಾಜನಗರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿತು. ಎಸಿಪಿ ಚಂದನ್ ನೇತೃತ್ವದ ತಂಡವು ಅರವಿಂದ್ ರೆಡ್ಡಿಯನ್ನು ಬಂಧಿಸಿತು. ಕೆಲವು ದಿನಗಳ ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡರು.

ಆರೋಪ – ಪ್ರತ್ಯಾರೋಪ

  • ನಟಿ ಆರೋಪಗಳು:
  • ಮದುವೆ ಭರವಸೆ ನೀಡಿ ಮೋಸ ಮಾಡಿದರು.
  • ಆತ್ಮಹತ್ಯೆಗೆ ಯತ್ನಿಸಿದಾಗ ಆಸ್ಪತ್ರೆಗೆ ಸೇರಿದ್ದಾಗಲೂ ಹಲ್ಲೆ ನಡೆಸಿದರು.
  • ಅಶ್ಲೀಲ ಚಿತ್ರ-ವೀಡಿಯೊಗಳನ್ನು ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರು.
  • ಉದ್ಯಮಿ ಪ್ರತಿಕ್ರಿಯೆ:
  • ನಟಿಯೇ ಹಣಕಾಸು ಮತ್ತು ವೈಯಕ್ತಿಕ ಕಾರಣಗಳಿಂದ ತಪ್ಪು ಆರೋಪ ಮಾಡುತ್ತಿದ್ದಾರೆ.
  • ತಮ್ಮ ವಿರುದ್ಧದ ಪ್ರಕರಣ ರಾಜಕೀಯ ಮತ್ತು ವೈಯಕ್ತಿಕ ದ್ವೇಷದಿಂದ ಪ್ರೇರಿತವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಪ್ರಕರಣದ ತನಿಖೆ ಮುಂದುವರಿಯುತ್ತಿದ್ದು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಪ್ರಕರಣವು ಚಿತ್ರರಂಗದಲ್ಲಿ ಮಹಿಳೆಯರ ಸುರಕ್ಷತೆ, ಉದ್ಯಮಿಗಳ ಪ್ರಭಾವ ಮತ್ತು ಕಾನೂನು ಜವಾಬ್ದಾರಿ ಕುರಿತ ಚರ್ಚೆಗೆ ಕಾರಣವಾಗಿದೆ.