ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ಪುತ್ರನ ಕಾರು ಮಾಗಡಿ ಸಮೀಪದ ರಸ್ತೆಯಲ್ಲಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಎಚ್ಎಂ ರೇವಣ್ಣ ಮಗ ಶಶಾಂಕ್ ಓಡಿಸಿದ್ದ ಕಾರು ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಡರಾತ್ರಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಮಾಗಡಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ KA 51 MQ 0555 ನಂಬರ್ ನ ಕಾರು, KA 02 KG 2034 ನಂಬರ್ ನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಮಾಗಡಿಯ ಗುಡೇಮಾರನಹಳ್ಳಿ ಗ್ರಾಮದ ಬಳಿ ತಡರಾತ್ರಿ ಈ ಅಪಘಾತ ನಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿ. ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್ ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಬರುವ ವೇಳೆ ಅಪಘಾತವಾಗಿದ್ದು, ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಗಡಿ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ. ಚಾಲಕನ ನಿರ್ಲಕ್ಷ್ಯವೇ ಕಾರಣವೇ, ಅಥವಾ ರಸ್ತೆ ಪರಿಸ್ಥಿತಿಯೇ ಕಾರಣವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಸರ್ಕಾರದ ನಿರ್ಧಾರ ನಿರೀಕ್ಷೆಯಲ್ಲಿದೆ.
ಮೃತ ಬೈಕ್ ಸವಾರನ ಕುಟುಂಬ ಆಘಾತಕ್ಕೊಳಗಾಗಿದೆ. ಸ್ಥಳೀಯರು ರಸ್ತೆ ಸುರಕ್ಷತೆ ಮತ್ತು ನಿಯಮ ಪಾಲನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
