Share This News

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದಕ್ಕೆ ಕಾರಣ ಬಂಗಾಳ ಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತ.ಕರಾವಳಿ ಭಾಗದ ಜನರಿಗೆ ಇದೊಂದು ಮಹತ್ವದ ಮುನ್ನೆಚ್ಚರಿಕೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಮೋಂತಾ’ ಎಂಬ ಚಂಡಮಾರುತ ತನ್ನ ರೌದ್ರಾವತಾರವನ್ನು ತಾಳುತ್ತಿದ್ದು, ಭಾರತದ ಪೂರ್ವ ಕರಾವಳಿಯತ್ತ ವೇಗವಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಇದರ ನೇರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ. ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭಾರಿ ಮುನ್ನೆಚ್ಚರಿಕೆ ನೀಡಿದೆ.

IMD ಸಿಸ್ಟಂ‌ನ ಅಂದಾಜು ಪ್ರಕಾರ ಮೋನ್ತಾ ಸಮುದ್ರದ ಮೇಲ್ಭಾಗದಲ್ಲಿ ತೀವ್ರ ಚಂಡಮಾರುತವಾಗಿ ರೂಪುಗೊಂಡಿದೆ ಮತ್ತು ಅದು ಮಧ್ಯರಾತ್ರಿ ಅಥವಾ ಅಲ್ಲಿಗೆ ಕೂಡಲೇ ನೆರೆಹೊರೆಯ ಕರಾವಳಿ ಕಡೆಗೆ ಮುಂದುಗೊಳ್ಳಬಹುದು; ಗಾಳಿಯ ವೇಗ 90–110 ಕಿಮೀ/ಘಂಟೆ ತಲುಪುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಮತ್ತು ಆಂತರಿಕ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಎಚ್ಚರಿಕೆಗಳನ್ನು ಹೊರಡಿಸಲಾಗಿದೆ ಮತ್ತು ಆಚೆಗೆಗಡೆ ಮಳೆಯ ಸಾಧ್ಯತೆ ಹೆಚ್ಚಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ ಪ್ರದೇಶಗಳಲ್ಲಿ ವೇಗವಾಗಿ ಮಳೆ ಬಂದು ಜಲಾಶಯಗಳು ತುಂಬಿ ಪ್ರವಾಹದ ಶಂಕೆ ಉಂಟಾಗಬಹುದು

ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಶೇ. 60 ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣವಿರಲಿದೆ. ನಗರದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ


Share This News