ಇಷ್ಟು ದಿನ ಮಳೆ..ಮಳೆ..ಅಂದಿದ್ದಾಯ್ತು. ಇದೀಗ ಚಳಿ..ಚಳಿ… ಎನ್ನುವಂತಾಗಿದೆ. ಚಳಿಗಾಲ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಶುಕ್ರವಾರ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ದಾಖಲಾಗಿದೆ. ನಗರದಲ್ಲಿ ಶುಕ್ರವಾರ ಕನಿಷ್ಠ ತಾಪಮಾನ 16.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಳೆಗಾಲ ಅಧಿಕೃತವಾಗಿ ಮುಗಿದು, ಕರ್ನಾಟಕದಲ್ಲಿ ಚಳಿಗಾಲ ಪ್ರವೇಶಿಸಿದೆ. ಬೆಂಗಳೂರು ನಗರದಲ್ಲಿ ನವೆಂಬರ್ 29ರ ಬೆಳಿಗ್ಗೆ ತಾಪಮಾನ 16.1° ಸೆಲ್ಸಿಯಸ್ಗೆ ಇಳಿದಿದ್ದು, ಜನರು ಚಳಿಯಿಂದ ನಡುಗಿದ್ದಾರೆ. ಮಲೆನಾಡು ಮತ್ತು ಉತ್ತರ ಕರ್ನಾಟಕದಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ.
ಜಿಲ್ಲಾವಾರು ಮುನ್ನೋಟ
- ಬೆಂಗಳೂರು: 16–18° ಸೆಲ್ಸಿಯಸ್, ಬೆಳಗಿನ ಹೊತ್ತಿನಲ್ಲಿ ತೀವ್ರ ಚಳಿ.
- ಮೈಸೂರು, ಮಂಡ್ಯ, ಚಾಮರಾಜನಗರ: 15–17° ಸೆಲ್ಸಿಯಸ್.
- ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು: 12–14° ಸೆಲ್ಸಿಯಸ್, ಮಂಜು–ಮಸುಕಿನ ವಾತಾವರಣ.
- ಬಾಗಲಕೋಟೆ, ವಿಜಯಪುರ, ಕಲಬುರಗಿ: 11–13° ಸೆಲ್ಸಿಯಸ್, ಉತ್ತರ ಕರ್ನಾಟಕದಲ್ಲಿ ತೀವ್ರ ಚಳಿ.
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿಟ್ವಾ ಚಂಡಮಾರುತ ಇರುವುದರಿಂದ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಬೆಳಗಿನ ಹೊತ್ತಿನಲ್ಲಿ ಮಂಜು – ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ತರಕಾರಿ, ಹಣ್ಣು ಬೆಳೆಗಳಿಗೆ ಚಳಿ ಪರಿಣಾಮ; ರೈತರಿಗೆ ಮುನ್ನೆಚ್ಚರಿಕೆ.
ಮುಂದಿನ ವಾರ ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳ ಕೆಲವು ಪ್ರದೇಶದಲ್ಲಿ ಚಂಡಮಾರುತದ ಪ್ರಭಾವದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇನ್ನು ಉತ್ತರ ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿ ಚಳಿಯ ಪ್ರಭಾವ ಹೆಚ್ಚಾಗಲಿದೆ. ಇದರ ಜತೆಗೆ ನಗರದಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ನಗರದ ವಿವಿಧ ಭಾಗಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಇಳಿಕೆ ಕಂಡಿದೆ.
ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿಗಾಲ ಪ್ರವೇಶಿಸಿರುವುದರಿಂದ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಕಂಡುಬಂದಿದೆ. 16.1° ಸೆಲ್ಸಿಯಸ್ನಲ್ಲಿ ನಡುಗಿದ ಬೆಂಗಳೂರು, ಮುಂದಿನ ದಿನಗಳಲ್ಲಿ ಇನ್ನಷ್ಟು ಚಳಿ ಹೆಚ್ಚಾಗುವ ಸಾಧ್ಯತೆ ಇದೆ.
